No Ads

IPS ಅಧಿಕಾರಿ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ ಅಂಗೀಕರಿಸಿದ ರಾಜ್ಯ ಸರ್ಕಾರ

ಕರ್ನಾಟಕ 2024-02-21 12:12:34 21
post

IPS ಅಧಿಕಾರಿ ಪ್ರತಾಪ್ ರೆಡ್ಡಿ ಅವರ ಸ್ವಯಂ‌‌‌ ನಿವೃತ್ತಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿಯವರು ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು. ಹಾಗಾಗಿ ಸರ್ಕಾರ ಏಪ್ರಿಲ್​ 30ರಂದು ನಿವೃತ್ತಿಯಾಗಲು ಅನುಮತಿ ನೀಡಿದೆ. ಜೂನ್ 30ರಂದು ನಿವೃತ್ತಿಯಾಗಬೇಕಿದ್ದ DGP ಪ್ರತಾಪ್ ರೆಡ್ಡಿಯವರು 2 ತಿಂಗಳು ಮೊದಲೇ ಸ್ವಯಂ ನಿವೃತ್ತಿ ‌ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪ್ರತಾಪ್ ರೆಡ್ಡಿಯವರು ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.

No Ads
No Reviews
No Ads

Popular News

No Post Categories
Sidebar Banner
Sidebar Banner